Wednesday, January 31, 2007

ಜಯ ಭಾರತ ಜನನಿಯ ತನುಜಾತೆ

ಜಯ ಭಾರತ ಜನನಿಯ ತನುಜಾತೆ,ಜಯ ಹೇ ಕರ್ನಾಟಕ ಮಾತೆ
ಜಯ ಸುಂದರ ನದಿವನಗಳ ನಾಡೇ ಜಯ ಹೇ ರಸ ಋಷಿಗಳ ಬೀಡೆ.
ಭೂದೇವಿಯ ಮಕುಟದ ನವಮಣಿಯೆ ಗಂಧದ ಚಂದದ ಹೊನ್ನಿನ ಗಣಿಯೆ
ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ !

ಜನನಿಯ ಜೋಗುಳ ವೇದದ ಘೋಶ,ಜನನಿಗೆ ಜೀವವು ನಿನ್ನಾವೇಶ,
ಹಸುರಿನ ಗಿರಿಗಳ ಸಾಲೇ, ನಿನ್ನಯ ಕೊರಳಿನ ಮಾಲೆ,
ಕಪಿಲ ಪತಂಜಲ ಗೌತಮ ಜಿನನುತ,ಭಾರತ ಜನನಿಯ ತನುಜಾತೆ !

ಶಂಕರ ರಾಮಾನುಜ ವಿದ್ಯಾರಣ್ಯ,ಬಸವೇಶರರಿಹ ದಿವ್ಯಾರಣ್ಯ
ರನ್ನ ಶಡಕ್ಷರಿ ಪೊನ್ನ,ಪಂಪ ಲಕುಮಿಪತಿ ಜನ್ನ
ಕಬ್ಬಿಗರುದಿಸಿದ ಮಂಗಳ ಧಾಮ,ಕವಿ ಕೋಗಿಲೆಗಳ ಪುಣ್ಯಾರಾಮ
ನಾನಕ ರಾಮಾನಂದ ಕಬೀರರ ಭಾರತ ಜನನಿಯ ತನುಜಾತೆ !

ತೈಲಪ ಹೊಯ್ಸಳರಾಳಿದ ನಾಡೇ,ಡಂಕಣ ಜಕಣರ ನಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗ,ಕಾವೇರಿಯ ವರ ರಂಗ
ಚೈತನ್ಯ ಪರಮಹಂಸ ವಿವೇಕರ,ಭಾರತ ಜನನಿಯ ತನುಜಾತೆ !

ಸರ್ವ ಜನಾಂಗದ ಶಾಂತಿಯ ತೋಟ,ರಸಿಕರ ಕಂಗಳ ಸೆಳೆಯುವ ನೋಟ
ಹಿಂದೂ ಕ್ರೈಸ್ತ ಮುಸಲ್ಮಾನ,ಪರಸಿಕ ಜೈನರುದ್ಯಾನ
ಜನಕನ ಹೋಲುವ ದೊರೆಗಳ ಧಾಮ,ಗಾಯಕ ವೈನಿಕರಾರಾಮ
ಕನ್ನದ ನುಡಿ ಕುಣಿದಾಡುವ ಗೇಹ,ಕನ್ನದ ತಾಯಿಯ ಮಕ್ಕಳ ದೇಹ
ಭಾರತ ಜನನಿಯ ತನುಜಾತೆ,ಜಯ ಹೇ ಕರ್ನಾಟಕ ಮಾತೆ

2 comments:

Knitpick said...

hey yenu nanna programmme hesaru ittiddeeya??!!krithi chourya maadtheeya?? :))

Kishor Narayan said...

ಬಹಳ ದಿನಗಳಿಂದ ನಿನ್ನ blogನಲ್ಲಿ ಯಾವುದೂ ಹೊಸ ಬರವಣಿಗೆ ಇಲ್ಲದಿರುವುದು ನೋಡಿ ಬೇಸರವಾಗಿದೆ. ಶೀಘ್ರವೇ ನೀನು ಪುನಃ ಬರೆಯಲು ಪ್ರಾರಂಭಿಸುತ್ತೀಯೆಂದು ಆಶಿಸುತ್ತೇನೆ.